ಅಥವಾ

ಒಟ್ಟು 153 ಕಡೆಗಳಲ್ಲಿ , 1 ವಚನಕಾರರು , 152 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಮಸ ಸಂಬಂಧ ಕನಿಷ್ಠಂಗೆ ಹುಸಿ ಜಾಗ್ರದಿಟದಂತೆ ತೋರುಗು. ರಾಜನ ಸಂಬಂಧ ಮಧ್ಯಮಂಗೆ ಹುಸಿ ತೂರ್ಯ ದಿಟದಂತೆ ತೋರುಗು. ಸಾತ್ವಿಕ ಸಂಬಂಧ ಉತ್ತಮಂಗೆ ದಿಟ ತಾನೆ ತಾನಾಗಿ ನಿಜ ನಿತ್ಯವಾಗಿರ್ದುದು, ಸಂದೇಹವಿಲ್ಲ. ಇದು ಸಚ್ಚಿದಾನಂದ ನಿತ್ಯ ಪರಿಪೂರ್ಣ ತೂರ್ಯಾತೀತವಪ್ಪ ತತ್ತ್ವ ಇಂತುಂಟೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು. ಭಾಷೆ ಬಳಸಿ ಹಂಗು ಹಳಸಿಹೋಯಿತ್ತು. ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆ ಕೊಟ್ಟಿಹೆನೆಂಬ ಶಬ್ದ ಅಳಿದರುಳಿಯಿತು.
--------------
ಚಂದಿಮರಸ
ದಾಸಯ್ಯನೆನಗೆ ಸಾಲೋಕ್ಯನಯ್ಯಾ, ಚೆನ್ನಯ್ಯನೆನಗೆ ಸಾಮೀಪ್ಯನಯ್ಯಾ. ಕಕ್ಕಯ್ಯನೆನಗೆ ಸಾರೂಪ್ಯನಯ್ಯಾ. ಮಾಚಯ್ಯನೆನಗೆ ಸಾಯುಜ್ಯನಯ್ಯಾ. ದಾಸಯ್ಯನೊಕ್ಕುದ ಕೊಂಡೆನು. ಚನ್ನಯ್ಯನ ಮಿಕ್ಕುದ ಕೊಂಡೆನು. ಕಕ್ಕಯ್ಯನುಂಡು ಮಿಕ್ಕುದ ಕಾದು ಕೊಂಡೆನು. ಮಾಚಯ್ಯನ ಜ್ಞಾನಪ್ರಸಾದವ ಕೊಂಡೆನು. ಪುರಾತರೊಳಗಾಗಿ ಬಸವಣ್ಣನ ಡಿಂಗರಿಗ ಚನ್ನಬಸವಣ್ಣನ ಹಳೆಯನೆಂದು ತಮ್ಮೊಕ್ಕುದನಿಕ್ಕಿ ಸಲಹಿದರು ಕಾಣಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಹಾವ ಹೊತ್ತುಕೊಂಡು ಹೋಗುತ್ತ ಹಾವಾಡಿಗ ನಡೆಯಲ್ಲಿ ಹಾವ ಕಂಡು ಮರಳುವ ಗಾವಿಲತನವ ನೋಡಾ! ತನ್ನಿಂದನ್ಯವೆಂದಡೆ ಬ್ಥಿನ್ನ ವ್ಯತಿಕರವಾಯಿತ್ತು. ತನ್ನ ಪರಮಾರ್ಥ ತನ್ನಲ್ಲಿ ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗ ಮಾಯಾಮರ್ಕಟ, ಜಡವೆ!
--------------
ಚಂದಿಮರಸ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ದೃಶ್ಯವ ಕಾಬ ದೃಷ್ಟನಾರೋ ಎಂದಡೆ ದೃಶ್ಯ ದೃಷ್ಟಗಳನರಿವ ಅರಿವದು ದೃಶ್ಯನೂ ಅಲ್ಲ ದೃಷ್ಟನೂ ಅಲ್ಲ. ಅದೃಶ್ಯಭಾವ ದೃಷ್ಟಿ ಚಿನ್ಮಯ ದರ್ಶನಾದಿ ಕ್ರಿಯೆಯಿಲ್ಲದ ಪರಿಪೂರ್ಣ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಜೀವಂಗೆ ಸ್ವಪ್ನದಂತೆ ದಿಟ ತೋರಿ ಜೀವನೊಡನೆ ಕೆಡುವ ಸಂಸಾರದ ಪರಮನೆಂದೇಕೆನುಡಿವೆಯೊ? ಪರಮನಾದಡೆ ಪರಮನಲ್ಲಿ ಪರಮರಾಗಿಯಾದಡು ಎನಗೆಕಾಣಬಾರದು. ದೋಷಪನ್ನಾರಿ ವೇದಾನುಭವವಿದು ಪ್ರತಿ ಚಿನ್ಮಯವಾಗಿಹುದು. ಈ ನಿಷ್ಕಲಬಿಂಬ ದಿಟವಿದೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ತೋರುವಡೆ ವಿಷಯವಾಗಿರದು, ಅದು ಅರಿಯಬಾರದಾಗಿ ಅರಿಯಬಾರದು, ಅರಿಯಬಾರದಾಗಿ ಹೇಳಬಾರದ, ಹೇಳಬಾರದಾಗಿ ಕಾಣಬಾರದು. ಅದು ಅತಕ್ರ್ಯ, ಅದು ನಿನ್ನಲ್ಲಿಯೆ ಇದೆ. ಅದ ಹೇಳಲಿಲ್ಲ ಕೇಳಲಿಲ್ಲ ಅರಿಯಲಿಲ್ಲ. ಅದನೇನೆಂಬೆ ಹೇಳಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಬಲುಹಾಗಿ ತತ್ವವಡಸಿದಾತ ಸತ್ತನೆ? ಕರಗುವ ತತ್ಪುಂಜನೆಯ ಕರಣವ ತಪ್ಪಿಸಿ ಪ್ರವೇಶಿಸುವಾತ ಸಂಚರಿಸುವ ತದ್ಬ ್ರಮೆಯಿಂದ ಬಯಲ ಕರಣಂಗಳಿಗೆಡೆಗೊಡುವ ಕತದಿಂ ಪಂಚಮಹಾರೂಪನ ಅಹಂಭಾವದ ಜೀವನಿಂದ ರಾಗಾದಿ ಮಲತ್ಯಾಗದಿಂದ, ಸಕಲ ಕರಣ ವ್ಯಾಪಾರದಿಂದ, ಉತ್ತುಂಗ ಪದೋನ್ನತಿಯಿಂದ ಸಮವೆನೆ, ಕರಣದೊಳಿಪ್ಪರಿವಿಂದೆ ಚೇಷ್ಟಿಸುವನಾಗಿ ಪ್ರಾಣಾದಿರೂಪನು. ತಾ ನುಡಿದುದ ತಾನೆ ಕೇಳುವ, ಲೇಸೆಂಬುದ ಹಿಡಿವ, ಮುಂದೆ ನೇತಿಗತಿಯ ಕರಣಂಗಳ ಕಾಬ, ಹೊಲ್ಲಹದವ ಬಿಡುತ್ತ ಸೇವಿಸುವ, ಸ್ವಚ್ಛಾಂಗ ಸುಖವಾಸನೆಗೆರಗುವ, ಕರ್ಮೇಂದ್ರಿಯದ ಬುದ್ಧೀಂದ್ರಿಯಾನಂದ ತಾನೆಂಬುದನಾರೂ ಅರಿಯರಯ್ಯಾ! ನೋಡಲೇನದ ನಿಶ್ಚಯಿಸಿ ನಾ ಬಲ್ಲೆನೆಂಬ ಆರಿದು ಮರೆಯದಂತೆ ರೂಪನಪ್ಪಿ ಸೋಹಮೆಂಬುದು ಜೀವ. ಇಂತಪ್ಪ ಸರ್ವದೃಷ್ಟವನೊಳಕೊಂಡು. ಪಂಚವಿಂಶತಿಯಾಗಿ ತೋರುವ ತೋರಿಕೆಯೆಲ್ಲಾ ಹುಸಿಯೆಂದರಿದರಿವು ನಿಜತತ್ವ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
`ಸರ್ವಂ ಖಲ್ವಿದಂ ಬ್ರಹ್ಮ' ಎಂದುದು ವೇದ. `ತ್ವಮೇವ ಬ್ರಹ್ಮ ನಾನ್ಯಾತೋಸ್ಮಿನ್' ಎಂದುದು ವೇದ. `ನಾನ್ಯಾತೋಸ್ಮಿನ್ ದೃಷ್ಟಾ' ಎಂದುದು ವೇದ. `ನಾನ್ಯತ್ ಕಿಂಚಿದ್ ವಿದ್ಯತೇ' ಎಂದುದು ವೇದ. `ನ ಕರ್ಮಣಾ ಲಿಪ್ಯತೇ' ಎಂದುದು ವೇದ. ತನ್ನಿಂದನ್ಯವೇನೂ ಇಲ್ಲವೆಂದರಿದರಿವು ಸಚ್ಚಿದಾನಂದಸ್ವರೂಪಮಪ್ಪ ನಿಜವು ನೀನೆ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಗುಣ ದೋಷ ಕರ್ಮಂಗಳನೇನೆಂದು ಅರಿಯ. ಈ ಜಗವೆಲ್ಲಾ ಮಾಯೆಯೆಂದು ಕಂಡನಭೇದ್ಯ. ಸುಖಸ್ವರೂಪ ನಿಜಗುಣ ನೀನೆ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಕಣ್ಣೆಯ್ದಿದ ಭಾವ ಕಾಲೆಯ್ದಿದ ಬಲ್ಲವೆ ಮರುಳೆ! ಮನವೆಯ್ದಿದ ಘನವು ತನುವಿಂಗೆ ಸಿಲುಕುವುದೆ? ಇದೆತ್ತಣ ಮಾತೊ? ...ಡನೆಂದರಿದ ಬಳಿಕ ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗವು ಹೊರಗರಸಲಿಲ್ಲ ನಿಲ್ಲು.
--------------
ಚಂದಿಮರಸ
ತನು ಕಿಂಕರನಾಗದೆ, ಮನಕಿಂಕರನಾಗದೆ, ಇಂದ್ರಿಯ ಕಿಂಕರನಾಗದೆ, ಆತ್ಮ ಕಿಂಕರನಾಗದೆ, ಶ್ರುತಿ ಕಿಂಕರನಾಗದೆ ಇವೆಲ್ಲವ ನೆರೆ ತೊರೆದು ಏನು ಎನ್ನದೆ ಮರ್ಯಾದೆ ತಪ್ಪದೆ ಸದ್ಗುರು ಕಿಂಕರನಾಗಿ ಭವಗೆಟ್ಟು ಹೋದವರನೇನೆಂಬೆ ಹೇಳಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಕಾಳಕೂಟ ಹಾಳಾಹಳ ವಿಷಂಗಳು ಕುಡಿದವರಲ್ಲನಲ್ಲದೆ ಮಿಕ್ಕವರನೇನನೂ ಮಾಡಲಮ್ಮವು ಸ್ತ್ರೀಯೆಂಬ ಕಡುನಂಜು ನೋಡಿದವರ, ನುಡಿಸಿದವರ, ಕೇಳಿದವರ, ಕೂಡಿದವರ, ಗಡಣ ಸಂಗಮಾತ್ರದಿಂ ಮಡುಹಿ ನರಕದಲ್ಲಿ ಕೆಡಹದೆ ಮಾಡಳು. ದೇವ ದಾನವ ಮಾನವರನಾದಡು ಉಳಿಯಲೀಯಳು! ಆವಂಗೆಯೂ ಗೆಲಬಾರದೀ ಮಾಯೆಯ! ಗೆಲಿದಾತ ನೀನೆ ಸಿಮ್ಮಲಿಗೆಯ ದಾತ ನೀನೆ, ಸಿಮ್ಮಲಿಗೆಯ ಚೆನ್ನರಾಮಾ!
--------------
ಚಂದಿಮರಸ
ಹಂದಿ ಹೈನವಲ್ಲ! ಸಂಸಾರಿ ಜಂಗಮವಲ್ಲ ಸಂಸಾರಿ ಜ್ಞಾನಿಗೂ ನಿರಾಭಾರಿ ಹೆಡ್ಡತನಕ್ಕೂ ಸರಿಯೆನ್ನಬಹುದೆ? ಸಿಮ್ಮಲಿಗೆಯ ಚೆನ್ನರಾಮಾ!
--------------
ಚಂದಿಮರಸ
ಇನ್ನಷ್ಟು ... -->