ಅಥವಾ

ಒಟ್ಟು 83 ಕಡೆಗಳಲ್ಲಿ , 19 ವಚನಕಾರರು , 72 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.
--------------
ಪ್ರಸಾದಿ ಲೆಂಕಬಂಕಣ್ಣ
ಎನ್ನ ಹೊತ್ತಿಪ್ಪವಳ ನೆತ್ತಿಯ ಕಣ್ಣಿನಲ್ಲಿಪ್ಪ ಂಗವ ನಾನೆಚ್ಚತ್ತು ನೋಡುವ ತೆರನೆಂತಯ್ಯಾ. ನೋಡ ಹೋದಡೆ ನೆತ್ತಿ ಒಡೆದು ಕಣ್ಣಾಯಿತ್ತು. ನೋಡರ್ದಡೆ ಎನಗವಳು ತೋರಳು. ಎನಗೆ ಕಾಬ ತೆರನ ತೋರಾ, ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.
--------------
ಸಿದ್ಧರಾಮೇಶ್ವರ
ಹೋದ ದಿವಸ ವಿಷವೆಂದರಿವುದು ಮನದಲ್ಲಿ. ಬರುವ ದಿವಸ ಸುಧಾಸಮವೆಂದರಿವುದು ಸದ್ಭಾವದಲ್ಲಿ. ಹೋದಂತೆ ಹೋದಡೆ ಕಲಿದೇವರ ಕಾಂಬ ಪರಿಯೆಂತೊ, ಸಿದ್ಧರಾಮಯ್ಯಾ ?
--------------
ಮಡಿವಾಳ ಮಾಚಿದೇವ
ಸಿಂಗದ ನಡು ಮುರಿಯಲಾ ಸಿಂಗವೇನು ಬಾತೆ ಸುಂಡಿಲು ಮುರಿಯಲು ಗಜವೇನು ಬಾತೆ ಸಂಗ್ರಾಮದಲ್ಲಿ ವೀರನುಳಿಯಲದೇನು ಬಾತೆ ಶೃಂಗಾರದ ಮೂಗು ಹೋದಡೆ ಶೃಂಗಾರವೇನು ಬಾತೆ ನಿಜ ತುಂಬಿದ ಭಕ್ತಿ ತುಳುಕಾಡದವರ ಸಂಗವೇನು ಬಾತೆ ಕೂಡಲಸಂಗಮದೇವಾ.
--------------
ಬಸವಣ್ಣ
ಜವನ ಕದ್ದ ಕಳ್ಳನು ಆಗಲಿ ಮಿಕ್ಕು ಹೋದಡೆ, ಅಗಲಕ್ಕೆ ಹಬ್ಬಿತ್ತು ಅಲ್ಲಲ್ಲಿ ನೋಡಲು. ಶರಣರ ಸಂಗವನರಸುವರೆಲಾ ್ಲಅಲ್ಲಲ್ಲಿ ನೋಡಿರೆ ! ಸಾಧಕರೆಲ್ಲರೂ ಸಾಧಿಸ ಹೋಗಿ, ಅಭೇದ್ಯವನರಿಯದೆ ಕೆಟ್ಟರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶಬ್ದ ನೋಡುವಡೆ ನಪುಂಸಕ; ಅದರ ಕಾರ್ಯ ನೋಡುವಡೆ, ಹರಿಹರ ಬ್ರಹ್ಮಾದಿಗಲನ್ನಲ್ಲ ಮುರಿದಿಕ್ಕಿತ್ತು. ಅದರಂತೆ ಹೋದಡೆ ತನ್ನ ಕಡೆ ಬರದು ನೋಡಾ, ಕಪಿಲಸಿದ್ಧಮಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಶಿವಭಕ್ತರು ತಮ್ಮ ನಿಜ ಕೈಲಾಸಕ್ಕೆ ಹೋದಡೆ ಅವರರಸಿಯ ಪಾರ್ವತಿಯ ಸತಿಯೆಂದು ಕಾಣಬೇಕು. ಅಲ್ಲಿ ಅನುಸರಣೆಯ ಕೊಟ್ಟು ಬೆರಸಿ ಮಾತನಾಡುವ ನರಕಿಗಳನೇನೆಂಬೆ, ರಾಮನಾಥ.
--------------
ಜೇಡರ ದಾಸಿಮಯ್ಯ
ನಟ್ಟಡವಿಯೊಳಗೆ ಇರುಳು-ಹಗಲೆನ್ನದೆ ಅಪ್ಪಾ! ಅಯ್ಯಾ! ಎಂದು ನಾನರಸುತ್ತ ಹೋದಡೆ, `ನಾನಿದ್ದೇನೆ ಬಾ ಮಗನೆ' ಎಂದು ಕರೆದು, ಎನ್ನ ಕಂಬನಿದೊಡೆದು, ತನ್ನ ನಿಜವ ತೋರಿದ ಪಾದವಿಂದೆನ್ನಲ್ಲಿಗೆ ನಡೆದುಬಂದಡೆ ನಾನರಿಯದೆ ಮರುಳುಗೊಂಡೆಹೆನೆಂದು ಎನ್ನ ಮನದೊಳಗೆಚ್ಚರ ಮಾಡಿದೆ. ಆತನನರಸಿಕೊಂಡು ಬಂದೆನ್ನ ಹೃದಯದಲಿಂಬಿಟ್ಟುಕೊಂಬೆ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನನ.
--------------
ಸಿದ್ಧರಾಮೇಶ್ವರ
ಸತ್ತ ಬಳಿಕ ಮುಕ್ತಿಯ ಹಡೆದೆಹೆನೆಂದು ಪೂಜಿಸ ಹೋದಡೆ, ಆ ದೇವರೇನ ಕೊಡುವರೊ ? ಸಾಯದೆ ನೋಯದೆ ಸ್ವತಂತ್ರನಾಗಿ, ಸಂದುಭೇದವಿಲ್ಲದಿಪ್ಪ ಗುಹೇಶ್ವರಾ ನಿಮ್ಮ ಶರಣ.
--------------
ಅಲ್ಲಮಪ್ರಭುದೇವರು
ಉಂಡು ಉಂಡು ಹೋಗುವವರ ನೋಡಿ ನೋಡಿ ನಾಚಿತ್ತಯ್ಯಾ ಎನ್ನ ಮನ. ಎಡಹಿ ಎಡಹಿ ಹೋಗುವವರ ನೋಡಿ ನೋಡಿ ನಾಚಿತ್ತಯ್ಯಾ ಎನ್ನ ಮನ. ಉಣದೆ ಎಡಹದೆ ಹೋದಡೆ ಅವರೆ ಬಸವಾದಿ ಪ್ರಮಥರೆಂಬೆ; ಅವರೆ ನೀವೆಂದು ಭಾವಿಸುವೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ!
--------------
ಸಿದ್ಧರಾಮೇಶ್ವರ
ಒಮ್ಮೆ ನೆಲದಲ್ಲಿ ಬಿತ್ತಿದ ಬಿತ್ತುವ ಕಿತ್ತಿ ಕಿತ್ತಿ ಮತ್ತೆ ಬಿತ್ತುತ್ತ ಹೋದಡೆ, ಆ ಬಿತ್ತು ಮೊಳೆತು ಕಳೆಯೇರಿ ಬೆಳೆದು ಬೆಳಸನೀವ ಪರಿಯಿನ್ನೆಂತೊ, ಮರುಳು ಮಾನವಾ ? ಗುರುವಿತ್ತ ಲಿಂಗವ ತೊರೆ ತೊರೆದು ಮರಳಿ ಮರಳಿ ಧರಿಸಿದಡೆ ಆ ಇಷ್ಟಲಿಂಗವು ಅನಿಷ್ಟವ ಕಳೆದು ಇಷ್ಟಾರ್ಥವನೀವ ಪರಿಯಿನ್ನೆಂತೊ ? ಇದು ಕಾರಣ- ಕೂಡಲಚೆನ್ನಸಂಗಯ್ಯನಲ್ಲಿ ಮುಕ್ತಿಯನರಸುವಡೆ ಅಂಗನಲ್ಲಿ ಹೆರೆಹಿಂಗದೆ ಲಿಂಗವ ಧರಿಸಬೇಕು
--------------
ಚನ್ನಬಸವಣ್ಣ
ಅಯ್ಯಾ, ನಾನು ಊರ ಮರೆದು ಆಡ ಹೋದಡೆ, ಒಕ್ಕಲು ಹೆಚ್ಚಿ ಸೊಕ್ಕಾಟ ಘನವಾಯಿತ್ತು. ಇದ ಕಂಡು ಊರ ಹೊಕ್ಕೆ, ಸ್ಥಾನದಲ್ಲಿ ನಿಂದೆ, ಒಂಬತ್ತು ಬಾಗಿಲ ಕದವನಿಕ್ಕಿದೆ. ಆ ಜ್ಞಾನಾಗ್ನಿಯ ಹೊತ್ತಿಸಲು, ಉರಿ ಎದ್ದಿತ್ತು, ಉಷ್ಣ ಊರ್ದ್ವಕ್ಕೇರಿತ್ತು. ತಲೆಯೆತ್ತಿ ನೋಡಲು, ಒಕ್ಕಲು ಓಡಿತ್ತು, ಊರು ಬಯಲಾಯಿತ್ತು. ಆ ಬಯಲನೆ ನೋಡಿ, ನಿರಾಳದೊಳಗಾಡಿ ಮಹಾಬೆಳಗನೆ ಕೂಡಿ, ಸುಖಿಯಾದರಯ್ಯಾ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಸೃಷ್ಟಿಯ ಮೇಲಣ ಕಣಿಯ ತಂದು, ಅಷ್ಟತನುವಿನ ಕೈಯಲ್ಲಿ ಕೊಟ್ಟು, ಕಟ್ಟಿ ಪೂಜೆಯ ಮಾಡಬೇಕೆಂಬರಯ್ಯಾ. ಅದೆಂತೆಂದಡೆ:ಭೂಮಿಗೆ ಹುಟ್ಟಿ ಶಿಲೆಯಾದ, ಕಲ್ಲುಕುಟಿಕನ ಕೈಯಲ್ಲಿ ರೂಪಾದ, ಗುರುವಿನ ಕೈಯಲ್ಲಿ ಮೂರ್ತಿಯಾದ. ಇಂತೀ ಮೂವರಿಗೆ ಹುಟ್ಟಿದ ಸೂಳೆಯ ಮಗನ ನಾನೇನೆಂದು ಪೂಜೆಯ ಮಾಡಲಿ ? ಅದು ಬಿದ್ದಿತ್ತೆಂದು ಸಮಾಧಿಯ ಹೊಕ್ಕಿಹೆನೆಂಬವನು, ಅಸ್ತ್ರ ಸಮಾಧಿ ಜಲಾಂತರ ವನಾಂತರ ದಿಗಂತರದಲ್ಲಿ ಸತ್ತಡೆ ಕುಂಭಿನಿಪಾತಕ ನಾಯಕನರಕ. ಕೈಯ ಲಿಂಗ ಹೋದಡೆ ಮನದ ಲಿಂಗ ಹೋದುದೆ ?_ಎಂದು ಎತ್ತಿಕೊಂಡು, ಅಷ್ಟವಿಧಾರ್ಚನೆ ಷೋಡಶೋಪಚಾರ ಮಾಡುವುದೆ ವ್ರತವು. ಇದ ಕಟ್ಟುವ ಭೇದವ, ಮುಟ್ಟುವ ಪಥವ ಚೆನ್ನಬಸವಣ್ಣನೊಬ್ಬನೆ ಬಲ್ಲನಲ್ಲದೆ ಮಿಕ್ಕ ಅಭ್ಯಾಸಕ್ಕೆ ಅಗ್ಘವಣಿಯ ಕೊಟ್ಟು ಪರವನೆಯ್ದಿದೆನೆಂಬ ಲಜ್ಜಗೇಡಿಗಳನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಸಹಭಾಜನ ಸಹಭೋಜನವೆಂದೆಂಬರು. ಭಾಜನವಾವುದು ಭೋಜನವಾವುದು ಎಂದರಿಯರು. ಭಾಜನವೆ ಅಂಗ, ಭೋಜನವೆ ಲಿಂಗ ! ಭಾಜನಸಹಿತ ಭೋಜನಮಾಡುವ ಹಿರಿಯರು, ಭಾಜನವನಿರಿಸಿ ಹೋದಡೆ ಅದೆ ಭಂಗ_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ನಿಧಾನವನರಸಿಹೆನೆಂದು ಹೋದಡೆ, ವಿಘ್ನಬಪ್ಪುದು ಮಾಬುದೆ ಸದಾಶಿವನೆಂದಡೆ, ಬೆದರಟ್ಟಿ ಸುಡುವುದು ಮಾಬುದೆ ಹದುಳಿಗನಾಗಿ ಉಳಿದಡೆ ಪದವನೀವ ಕಾಣಾ ಕೂಡಲಸಂಗಮದೇವ.
--------------
ಬಸವಣ್ಣ
ಇನ್ನಷ್ಟು ... -->