ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆಕಾರ ನಿರಾಕಾರವೆಂಬೆರಡೂ ಸ್ವರೂಪಂಗಳು ;ಒಂದು ಆಹ್ವಾನ, ಒಂದು ವಿಸರ್ಜನ,ಒಂದು ವ್ಯಾಕುಳ, ಒಂದು ನಿರಾಕುಳ.ಉಭಯಕುಳರಹಿತ ಗುಹೇಶ್ವರಾ_ನಿಮ್ಮ ಶರಣ ನಿಶ್ವಿಂತನು.
ಆಕಾರನಿರಾಕಾರವೆಂಬೆರಡೂ ತಾನೆ;ದಿಟ ದಿಟ ತಪ್ಪದು ಕೇಳಾ.ಆಕಾರಕ್ಕೆ ಭಾವವೆ ಪ್ರಾಣ (ಪ್ರಮಾಣ?)ನಿರಾಕಾರಕ್ಕೆ ಮಹಾಜ್ಞಾನವೆ ಪ್ರಾಣ (ಪ್ರಮಾಣ?)_ಇಂತೀ ಉಭಯಕುಳಕ್ಕೆ ಇದು ಲಕ್ಷಣ ಕೇಳಾ.ಎರಡರೊಳಗೆ ಆವ ಮುಖದಲ್ಲಿ ಇಪ್ಪಾತನು,ಆ ಮುಖದಲ್ಲಿ ಶುದ್ಧನಾಗದನ್ನಕ್ಕರಗುಹೇಶ್ವರಲಿಂಗಕ್ಕೆ ದೂರ ಕೇಳಾ ಸಂಗನಬಸವಣ್ಣಾ.